August 4, 2026
Startv News | Hubli | Kannada News
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, ಒಂಬತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ..!

ಬೆಂಗಳೂರು ಅ.30: ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಎಸ್​ವಿ ಕೋಚ್ ವರ್ಕ್ಸ್​ನಲ್ಲಿನ ಖಾಸಗಿ ಬಸ್ (Privet Bus)ಅಗ್ನಿ ಅವಘಡಕ್ಕೆ (Fire Accident) ಸಂಬಂಧಿಸಿದಂತೆ ಬೆಂಕಿ ಹೊತ್ತಿ ಉರಿಯುವಾಗ ಸ್ಥಳದಲ್ಲಿ 12 ಗ್ಯಾಸ್ ಸಿಲಿಂಡರ್​ಗಳು (Gas Cylinder) ಇದ್ದವು. ಅದೃಷ್ಟವಶಾತ್​ ಸಿಲಿಂಡರ್​ಗೆ ಬೆಂಕಿ ತಾಗದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಅಲ್ಲದೆ 30 ಬಸ್​ಗಳಲ್ಲಿದ್ದ ಬ್ಯಾಟರಿಗಳನ್ನು ತೆಗೆದಿದ್ದರಿಂದ ಅನಾಹುತ ತಪ್ಪಿದೆ. ಒಂದು ವೇಳೆ ಗ್ಯಾಸ್​​ ಸಿಲಿಂಡರ್​ಗೆ ಬೆಂಕಿ ತಗುಲಿದ್ದರೇ ಭಾರಿ ಅನಾಹುತವೇ ಸಂಭವಿಸುತ್ತಿತ್ತು.

ಕಳೆದ 15 ವರ್ಷಗಳಿಂದ ಕೋಚ್ ವರ್ಕ್ಸ್​​​ನಲ್ಲಿ ಖಾಸಗಿ ಬಸ್​ಗಳನ್ನು​ ರಿಪೇರಿ ಮಾಡಲಾಗುತ್ತಿದೆ. ಇಂದು ಬೆಳಿಗ್ಗೆ 11:30ರ ಸುಮಾರಿಗೆ ಬಸ್​​ವೊಂದರ ತುರ್ತು ನಿರ್ಗಮನ ದ್ವಾರ ದುರಸ್ತಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೋಚ್ ವರ್ಕ್ಸ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದರೊಳಗಾಗಿ, ಎರಡು ಬಸ್​ಗಳಿಗೆ ಬೆಂಕಿ ವ್ಯಾಪಿಸಿತ್ತು.

ನೋಡು ನೋಡುತ್ತಿದ್ದಂತೆ ಬೆಂಕಿ ಸ್ಥಳದಲ್ಲಿ ನಿಲ್ಲಿಸಿದ್ದ 30 ಬಸ್​ಗಳ ಪೈಕಿ 18 ಬಸ್​ಗಳಿಗೆ ಆವರಿಸಿಕೊಂಡಿದೆ. ಇದರಿಂದ 18 ಬಸ್​​ಗಳು ಸುಟ್ಟು ಕರಕಲಾಗಿವೆ. ಇನ್ನು ಎಸಿ ಬಸ್​ಗಳಲ್ಲಿ ಸೀಟ್, ಸ್ಕೀನ್​ಗಳು ಇರುವುದರಿಂದ ಬೆಂಕಿ ಹೆಚ್ಚಾಗಿದೆ. ನಾಲ್ಕು ಬಸ್​ಗಳಿಗೆ ಬೆಂಕಿ ತಗುಲಿಲ್ಲ, 10 ಬಸ್​ಗಳನ್ನು​ ಸಿಬ್ಬಂದಿ ಹೊರತೆಗೆದಿದ್ದರು. ಎಸ್​ವಿ ಕೋಚ್ ವರ್ಕ್ಸ್​ನಲ್ಲಿ 42 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಇದೀಗ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Share

Related posts

BREAKING : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ʻಲೀಲಾರಾಮ್ ಭೋಜ್ವಾನಿʼ ವಿಧಿವಶ |

admin

ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ.! ಪೂರ್ತಿ ವಿಡಿಯೋ ನೋಡಿ.

admin

ಹುಬ್ಬಳ್ಳಿ:ಸುರಿಯುವ ಮಳೆಯಲ್ಲಿ ಪೌರಕಾರ್ಮಿಕರ 3 ನೇ ದಿನದ ಅರೆಬೆತ್ತಲೆ ಪ್ರತಿಭಟನೆ.!

admin

Leave a Comment